×
Ad

ಕಾಸರಗೋಡು | ನಿಲ್ಲಿಸಿದ್ದ ಬಸ್ಸಿಗೆ ಬೈಕ್ ಢಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

Update: 2025-07-17 13:10 IST

ಕಾಸರಗೋಡು: ನಿಲುಗಡೆಗೊಳಿಸಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪೊಯಿನಾಚಿ ಸಮೀಪದ ಬಟ್ಟತ್ತೂರು ಎಂಬಲ್ಲಿ ನಡೆದಿದೆ.

ಕುನಿಯ ನಿವಾಸಿ ಕೆ.ವಿ.ಅಬ್ದುಲ್ ರಹ್ಮಾನ್ (19) ಮೃತಪಟ್ಟವರು. ರಾಷ್ಟ್ರೀಯ ಹೆದ್ದಾರಿಯ ಬಟ್ಟತ್ತೂರಿನಲ್ಲಿ ಮಂಗಳವಾರ ಸಂಜೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ರಹ್ಮಾನ್ ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ವಿ.ಅಬ್ದುಲ್ ರಹ್ಮಾನ್ ಎಸ್ಸೆಸ್ಸೆಫ್ ಕುನಿಯ ಘಟಕದ ಕಾರ್ಯದರ್ಶಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News