×
Ad

ಕಾಸರಗೋಡು | ಕಂದಕಕ್ಕೆ ಉರುಳಿ ಬಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್ : ಓರ್ವ ಮೃತ್ಯು, ಹಲವು ಮಂದಿಗೆ ಗಾಯ

Update: 2025-11-29 16:44 IST

ಕಾಸರಗೋಡು: ಶಬರಿಮಲೆ ಯಾತ್ರಾರ್ಥಿಗಳು ಸಂಚರಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಚಿತ್ತರಿಕ್ಕಾಲ್ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಮೈಸೂರಿನ ಹರೀಶ್ ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಈ ಬಸ್ಸು ಶಬರಿಮಲೆಗೆ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಸ್ಸು ರಸ್ತೆಯಿಂದ 30 ಅಡಿ ಯಷ್ಟು ಆಳಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ನಾಗರಿಕರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿ 50 ರಷ್ಟು ಯಾತ್ರಾರ್ಥಿಗಳು ಇದ್ದರು ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News