×
Ad

ಕಾಸರಗೋಡು | ದೀಪಾವಳಿ ಪ್ರಯುಕ್ತ ಅಲಂಕಾರ ದೀಪ ಅಳವಡಿಸುತ್ತಿದ್ದಾಗ ವಿದ್ಯುತ್ ಆಘಾತ: ಯುವಕ ಮೃತ್ಯು

Update: 2025-10-21 09:30 IST

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಸೀತಾಂಗೋಳಿ ಸಮೀಪದ ಪುತ್ತಿಗೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಪುತ್ತಿಗೆ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ ( 37) ಮೃತಪಟ್ಟವರು.

ದೀಪಾವಳಿ ಅಂಗವಾಗಿ ಮನೆಯಂಗಳದಲ್ಲಿ ಅಲಂಕಾರ ವಿದ್ಯುದ್ದೀಪಗಳನ್ನು ಅಳವಡಿಸುತ್ತಿದ್ದಾಗ ರಾಜೇಶ್ ಶಾಕ್ ತಗುಲಿದೆ. ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜೇಶ್ ಬಡಗಿ ವೃತ್ತಿ ನಿರ್ವಹಿಸುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News