×
Ad

ಕಾಸರಗೋಡು: ಚಂದ್ರಗಿರಿ ಹೊಳೆಗೆ ಬಿದ್ದು ವ್ಯಕ್ತಿ ಕಾಣೆ

Update: 2023-11-01 11:49 IST
ಸಾಂದರ್ಭಿಕ ಚಿತ್ರ

ಕಾಸರಗೋಡು, ನ.1: ದೋಣಿಯಿಂದ ಚಂದ್ರಗಿರಿ ಹೊಳೆಗೆ ಬಿದ್ದು ಓರ್ವ ವ್ಯಕ್ತಿ ನಾಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮೇಲಂಗೋಡು ನಿವಾಸಿ ಮಜೀದ್ (50) ನಾಪತ್ತೆಯಾದವರು. ಮೂವರು ಸ್ನೇಹಿತರ ಜೊತೆ ದೋಣಿ ಪ್ರಯಾಣ ಹೊರಟಿದ್ದರು, ಸ್ವಲ್ಪ ಮುಂದಕ್ಕೆ ಸಾಗುತ್ತಿದ್ದಂತೆ ಮಜೀದ್ ದೋಣಿಯಿಂದ ಹೊಳೆಗೆ ಬಿದ್ದು ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

ಉಳಿದ ಮೂವರು ದಡಕ್ಕೆ ತಲುಪಿ ಬಳಿಕ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಶೋಧ ಕಾರ್ಯ ಮುಂದುವರಿದಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪರಿಸರ ವಾಸಿಗಳು ಶೋಧ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News