×
Ad

ಮಂಜೇಶ್ವರ: ಲಾರಿ ತಡೆದು 1.64 ಲಕ್ಷ ರೂ. ದರೋಡೆ; ದೂರು ದಾಖಲು

Update: 2024-10-16 14:00 IST

ಕಾಸರಗೋಡು: ಲಾರಿ ತಡೆದು ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮುಂಜಾನೆ ಪೈವಳಿಕೆ ಸಮೀಪದ ಅಟ್ಟೆಗೋಳಿಯಲ್ಲಿ ನಡೆದಿದೆ.

ಮೀನು ತರಲು ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಲಾರಿ ಚಾಲಕ ಯೂಸಫ್ ನನ್ನು ತಡೆದು ಚಾಕು ತೋರಿಸಿ ಹಣವನ್ನು ದರೋಡೆ ಮಾಡಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದು, ಸಿ ಸಿ ಟಿ ವಿ ಕ್ಯಾಮರಾ ತಪಾಸಣೆ ನಡೆಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News