×
Ad

ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ವಿಷ್ಣು ಭಟ್ ನಿಧನ

Update: 2024-01-10 12:11 IST

ಕಾಸರಗೋಡು, ಜ.10: ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ಅನೆಮಜಲು ವಿಷ್ಣು ಭಟ್ (65) ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ವಲಯಗಳ ಮುಂದಾಳುವಾಗಿದ್ದ ವಿಷ್ಣು ಭಟ್ ಜನಾನುರಾಗಿಯಾಗಿದ್ದರು. ಇವರು ಮಲ್ಲ ಶ್ರೀ ದುರ್ಗಾ ಪರ ಮೇಶ್ವರಿ ಶಾಲೆಯ ಮೆನೇಜರ್ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News