×
Ad

ಉಪ್ಪಳ : ಕಾರು, ಸ್ಕೂಟರ್ ಢಿಕ್ಕಿ; ತಲಪಾಡಿ ನಿವಾಸಿ ಮೃತ್ಯು

Update: 2025-08-28 10:37 IST

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಉಪ್ಪಳ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ.

ತಲಪಾಡಿಯ ಅಬ್ದುಲ್ ಹಮೀದ್ (48) ಮೃತಪಟ್ಟವರು. ಸ್ಕೂಟರ್ ಚಲಾಯಿಸಿದ ಅಜೀಸ್ ಅಹಮ್ಮದ್ ( 41) ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲಪಾಡಿ ಕಡೆಯಿಂದ ಉಪ್ಪಳಕ್ಕೆ ಬರುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಹಮೀದ್ ರನ್ನು ಉಪ್ಪಳದ ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News