×
Ad

ಮಡಿಕೇರಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 95,500 ಸಾವಿರ ರೂ. ನಗದು ವಶಕ್ಕೆ

Update: 2024-04-13 17:10 IST
ಸಾಂದರ್ಭಿಕ ಚಿತ್ರ

ಮಡಿಕೇರಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಗಡಿ ತಪಾಸಣೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ವಾಹನ ತಪಾಸಣೆ ವೇಳೆ ದಾಖಲೆಯಿಲ್ಲದ 95,500 ಸಾವಿರ ರೂ. ನಗದನ್ನು ಚುನಾವಣೆ ನಿಯೋಜಿತ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ವಿರಾಜಪೇಟೆಯ ಪೆರುಂಬಾಡಿ ತಪಾಸಣಾ ಕೇಂದ್ರದಲ್ಲಿ ನಡೆದಿದೆ.

ವಿರಾಜಪೇಟೆ ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರಲ್ಲಿ ಚುನಾವಣೆ ಸಂಭಂದಿಸಿದಂತೆ ಕೇರಳ ರಾಜ್ಯದಿಂದ ಗಡಿಯ ಮೂಲಕ ರಾಜ್ಯಕ್ಕೆ ಬರುವ ಎಲ್ಲಾ ರೀತಿಯ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಸಂದರ್ಭ ಮೈಸೂರಿಗೆ ತೆರಳುತ್ತಿದ್ದ ಕೇರಳದ ಇರಿಟಿ ನಗರದ ರಂಶೀದ್ (35) ಅವರ ಕಾರನ್ನು ತಪಾಸಣೆ ನಡೆಸಿ, ದಾಖಲೆ ಇಲ್ಲದ 95,500 ಸಾವಿರ ರೂ. ನಗದನ್ನು ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದಿರುವ ಹಣವನ್ನು ಚುನಾವಣೆ ಅಧಿಕಾರಿಗಳು ಉಪ ಖಜಾನೆ ಅಧಿಕಾರಿಗಳಿಗೆ ಒಪ್ಪಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News