×
Ad

ಮಡಿಕೇರಿ: ಪತ್ನಿಗೆ ವಿಡಿಯೋ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

Update: 2025-11-16 21:41 IST

ಸಾಂದರ್ಭಿಕ ಚಿತ್ರ (credit: Grok)

ಮಡಿಕೇರಿ: ಕಾಳು ಮೆಣಸು ಕಳ್ಳತನದ ಆರೋಪದಡಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿಗೆ ಲೈವ್ ವಿಡಿಯೋ ಕರೆ ಮಾಡಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ.

ಕಿಬ್ಬೆಟ್ಟ ಗ್ರಾಮದ ಕೀರ್ತಿ (32) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮಡಿಕೇರಿ ತಾಲೂಕಿನ ಬೋಯಿಕೇರಿ ಸಮೀಪದ ತೋಟವೊಂದಕ್ಕೆ ಹೋದ ಕೀರ್ತಿ ಊರಿನಲ್ಲಿದ್ದ ಪತ್ನಿಗೆ ಲೈವ್ ವಿಡಿಯೋ ಮಾಡಿ ಮನೆಗೆ ಬರುವಂತೆ ಕರೆದಿದ್ದಾನೆ. ಆಕೆ ಬರಲು ಒಪ್ಪದೆ ಇದ್ದಾಗ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಯಡವಾರೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದ್ದ ಕಾಳು ಮೆಣಸು ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಕೀರ್ತಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News