×
Ad

ಕೊಡಗು | ಮರದ ರೆಂಬೆಗಳನ್ನು ಕಡಿಯುತ್ತಿದ್ದ ವೇಳೆ ಬಿದ್ದು ಕಾರ್ಮಿಕ ಮೃತ್ಯು

Update: 2025-06-20 19:52 IST

 ದಿನೇಶ್(59)

ಮಡಿಕೇರಿ: ಮರದ ರೆಂಬೆಗಳನ್ನು ಕಡಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಮರಳಗಟ್ಟೆಯ ಮುತ್ತೂರು ಕಾಲೋನಿಯ ನಿವಾಸಿ ದಿನೇಶ್(59) ಸಾವನ್ನಪ್ಪಿರುವವರು.

ಬೆಟ್ಟದಕಾಡು ಗ್ರಾಮದ ತೋಟದಲ್ಲಿ ದಿನೇಶ್ ಮರದ ರೆಂಬೆಗಳನ್ನು ಕಡಿಯುವ ಕೆಲಸದಲ್ಲಿ ತೊಡಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News