×
Ad

ಮಡಿಕೇರಿ: ದುರಸ್ತಿ ವೇಳೆ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

Update: 2023-11-09 20:35 IST

ಮಡಿಕೇರಿ: ವಿದ್ಯುತ್ ಲೈನ್ ದುರಸ್ತಿ ಪಡಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶಗೊಂಡು ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಆರ್ಜಿ ಗ್ರಾಮದಲ್ಲಿ ನಡೆದಿದೆ.

ಅನಿಲ್ ಮ್ಯಾನೇಜಸ್(45) ಎಂಬವರು ಮೃತಪಟ್ಟವರು. ಕಳೆದ 20 ವರ್ಷಗಳಿಂದ ಅನಿಲ್ ಅವರು ವಿರಾಜಪೇಟೆ ವಲಯದಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೆಗ್ಗಳ ವಿಭಾಗಕ್ಕೆ ಒಳಪಡುವ ಆರ್ಜಿ ಗ್ರಾಮದಲ್ಲಿ 11 ಕೆ.ವಿ ವಿದ್ಯುತ್ ತಂತಿ ದುರಸ್ತಿಪಡಿಸುತ್ತಿದ್ದ ಸಂದರ್ಭ ಮತ್ತೊಂದು ಭಾಗದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯಿಂದ ಭೂಮಿಗೆ ವಿದ್ಯುತ್ ಪ್ರಹರಿಸಿ ಅನಿಲ್ ಮ್ಯಾನೇಜಸ್ ಸ್ಥಳದಲ್ಲೇ ಮೃತಪಟ್ಟರು.

ಘಟನಾ ಸ್ಥಳಕ್ಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಪಿ.ಎಸ್, ಸಹಾಯಕ ಇಂಜಿನಿಯರ್ ಟೆಕ್ನಿಕಲ್ ವಿಭಾಗದ ಸೋಮೇಶ್, ಸಹಾಯಕ ಇಂಜಿನಿಯರ್ ಅಯ್ಯನ ಗೌಡ ಪಾಟೀಲ್ ಭೇಟಿ ನೀಡಿದರು. ಘಟನೆ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News