ಮಡಿಕೇರಿ | ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿ ನೀರು ಪಾಲು

Update: 2024-04-11 13:17 GMT
ಸಾಂದರ್ಭಿಕ ಚಿತ್ರ

ಮಡಿಕೇರಿ : ಸ್ನಾನಕ್ಕೆಂದು ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವನ್ನಪಿದ ಘಟನೆ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ವರದಿಯಾಗಿದೆ

ಮೃತ ವ್ಯಕ್ತಿಯನ್ನು ಕಕ್ಕಬ್ಬೆ ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ(38) ಎಂದು ಗುರುತಿಸಲಾಗಿದೆ. ದೇವಯ್ಯ ಅವರು ತನ್ನ ಸಹೋದರನ ಜೊತೆ ತೋಟದ ಕೆಲಸಕ್ಕೆ ತೆರಳಿದ್ದು, ಬಿಸಿಲಿನ ತಾಪದಿಂದ ಸ್ನಾನ ಮಾಡಲು ಕುವಲೆಕಾಡು ಗ್ರಾಮದ ಕುಪ್ಪೋಟು ನದಿಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News