×
Ad

ಮಡಿಕೇರಿ | ಕಾಡಾನೆ ದಾಳಿಗೆ ವೃದ್ದೆ ಬಲಿ

Update: 2024-08-30 17:45 IST

ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಒದಗಿಸುವ ಭರವಸೆ ನೀಡಿದರು. 

ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಚೆನ್ನಯ್ಯನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.

ಕಾತಯಿ(72) ಎಂಬುವವರೇ ಮೃತ ವೃದ್ಧೆಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಗನ ಮನೆಯಿಂದ ಹೊರ ಬರುತ್ತಿದ್ದ ಕಾತಯಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿ ತುಳಿದಿದೆ ಎಂದು ತಿಳಿದು ಬಂದಿದೆ.

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆಗಳು ಗ್ರಾಮದಲ್ಲಿ ಉಪಟಳ ನೀಡುತ್ತಿವೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News