×
Ad

ಮಡಿಕೇರಿ | ದ್ವಿಚಕ್ರ ವಾಹನ ಸವಾರನ ಮೇಲೆ ಕಾಡಾನೆ; ವಾಹನ ಜಖಂ

Update: 2025-01-04 21:43 IST

ಮಡಿಕೇರಿ : ದ್ವಿಚಕ್ರ ವಾಹನ ಸವಾರನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮಡಿಕೇರಿ ತಾಲ್ಲೂಕಿನ ಜೋಡುಪಾಲದಲ್ಲಿ ನಡೆದಿದೆ.

ಸ್ಥಳೀಯ ಕಾರ್ಮಿಕ ಮುತ್ತಯ್ಯ ಎಂಬುವವರು ಎಂದಿನಂತೆ ಬೆಳಗಿನ ಜಾವ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಪಾಲದ 10ನೇ ಮೈಲ್ ಬಳಿ ಕಾಡಾನೆ ದಾಳಿ ನಡೆಸಿದೆ. ಮುತ್ತಯ್ಯ ಅವರು ಆನೆ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾಡಾನೆ ದ್ವಿಚಕ್ರ ವಾಹನವನ್ನು ತುಳಿದು ಜಖಂಗೊಳಿಸಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News