×
Ad

ಸೋಮವಾರಪೇಟೆ | ಸಾಲದ ಬಾಧೆ ಶಂಕೆ : ಮಹಿಳೆ ಆತ್ಮಹತ್ಯೆ

Update: 2025-02-12 22:46 IST

ಮಡಿಕೇರಿ : ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ  ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ.

ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ(50) ಎಂಬುವವರೇ ಮೃತಪಟ್ಟ ಮಹಿಳೆಯಾಗಿದ್ದಾರೆ. ಸಾಲದ ಬಾಧೆ ತಾಳಲಾರದೆ ಸಾವಿಗೆ ಶರಣಾಗಿರುವುದಾಗಿ ಆರೋಪಿಸಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಹಸೀನಾ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಬುಧವಾರ ಪತಿ ಗಾರೆ ಕೆಲಸಕ್ಕೆ ತೆರಳಿದ ಬಳಿಕ ಮನೆಯ ಬಾತ್ ರೂಮ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News