ಮಡಿಕೇರಿ: ಲಾರಿ ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2025-03-11 18:32 IST
ಮಡಿಕೇರಿ: ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಲುಕುಪ್ಪೆ ಹೆದ್ದಾರಿಯಲ್ಲಿ ನಡೆದಿದೆ.
ಕುಶಾಲನಗರದ ಕರಿಯಪ್ಪ ಬಡಾವಣೆ ನಿವಾಸಿ, ದೇವಾಂಗ ಸಂಘದ ಸಂಚಾಲಕ ಡಿ.ಎನ್.ಶಶಿ (47) ಮೃತಪಟ್ಟವರು.
ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.