×
Ad

ಸುಂಟಿಕೊಪ್ಪ: ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2024-08-09 14:38 IST

ಮಡಿಕೇರಿ ಆ.9 : ಬೈಕ್ ಮರಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ಪಿರಿಯಾಪಟ್ಟಣ ತಾಲೂಕು ನವಿಲೂರು ಗ್ರಾಮದ ಆಕಾಶ್ ಹಾಗೂ ಪ್ರಸನ್ನ ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ಕೆಲಸಕ್ಕೆಂದು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಸನ್ನ ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News