ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ
Update: 2025-12-31 22:31 IST
ಕೆ. ರಾಮರಾಜನ್
ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.