×
Ad

ಕೋಲಾರ: ಕೆಎಸ್ಸಾರ್ಟಿಸಿ ಬಸ್ ಗೆ ಓಮ್ನಿ ಢಿಕ್ಕಿ; ಓರ್ವ ಮೃತ್ಯು

Update: 2025-05-22 09:15 IST

ಕೋಲಾರ:ಕೆಎಸ್ಸಾರ್ಟಿಸಿ ಬಸ್ ಗೆ ಓಮ್ನಿ  ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗಾಂಧಿನಗರ ಬಳಿ ಗುರುವಾರ ಮುಂಜಾನೆ ನಡೆದಿದೆ. 

ಮುಳಬಾಗಿಲು ತಾಲ್ಲೂಕು ವಡ್ಡಹಳ್ಳಿ ಗ್ರಾಮದ ಚೇತನ್(21) ಮೃತ ಯುವಕ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಯುವಕ ಹೆಚ್.ಕ್ರಾಸ್ ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ಘಟನೆ ನಡೆದಿದೆ.

ಸ್ಥಳಕ್ಕೆ ಕೋಲಾರ ಸಂಚಾರಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News