×
Ad

ಗಂಗಾವತಿ | ಶಾಲೆಗೆ ಹೊರಟಿದ್ದ ವೇಳೆ ಮೈಮೇಲೆ ಬಿದ್ದ ವಿದ್ಯುತ್ ತಂತಿ; ಶಿಕ್ಷಕಿ ಸ್ಥಳದಲ್ಲೇ ಮೃತ್ಯು

Update: 2025-04-03 17:42 IST

ಹರಿತಾ ಶ್ರೀನಿವಾಸ 

ಗಂಗಾವತಿ : ಶಾಲಾ ಶಿಕ್ಷಕಿಯೊಬ್ಬರ ಮೇಲೆ ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲಿಯೇ ಶಿಕ್ಷಕಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿಯ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ವಿದ್ಯಾನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಶಾಲೆಯ ವಾಹನ ದಿನನಿತ್ಯ ಗ್ರಾಮಕ್ಕೆ ಬಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಎಂದಿನಂತೆ ಶಾಲೆಗೆ ಹೋಗಲು ತಮ್ಮ ಮನೆಯಿಂದ ಬೈಕ್‌ನಲ್ಲಿ ಶಿಕ್ಷಕಿ ಹರಿತಾ ಬಂದಿದ್ದಾರೆ. ಆದರೆ, ರಾತ್ರಿ ಇಡೀ ಸುರಿದ ಮಳೆಯಿಂದಾಗಿ ವಿದ್ಯುತ್‌ ತಂತಿ ಶಿಕ್ಷಕಿಯ ಮೇಲೆ ಬಿದ್ದಿದ್ದು, ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News