×
Ad

ಡಿವೈಡರ್ ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್; ಏಳು ವರ್ಷದ ಬಾಲಕ ಮೃತ್ಯು

Update: 2023-09-27 12:37 IST

ಚಿಕ್ಕಮಗಳೂರು: ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

ಮೃತ ಬಾಲಕನನ್ನು ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿ ಪ್ರಮೋದ್ ಎಂದು ಗುರುತಿಸಲಾಗಿದೆ. 

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದಿದೆ.  ಘಟನೆಯಲ್ಲಿ 12 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ತರೀಕೆರೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News