×
Ad

ಕುಂದಾಪುರ: ಡ್ರೈವರ್ ಇಲ್ಲದೆ ಚಲಿಸಿದ ಖಾಸಗಿ ಬಸ್; ನಿಂತಿದ್ದ ಕಾರಿಗೆ ಢಿಕ್ಕಿ

Update: 2025-01-13 14:18 IST

ಕುಂದಾಪುರ: ಡಿಪೋದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸೊಂದು ಡ್ರೈವರ್ ಇಲ್ಲದೆ ಚಲಿಸಿ ಎರಡು ಸರ್ವೀಸ್ ರಸ್ತೆ ಹಾಗೂ ಹೆದ್ದಾರಿ ಬ್ಯಾರಿಕೇಡ್ ದಾಟಿ ಹೋಟೆಲೊಂದರ ಮುಂದಿದ್ದ ಕಾರಿಗೆ ಢಿಕ್ಕಿಯಾಗಿ ನಿಂತ ಘಟನೆ ಕುಂದಾಪುರ ಹೊರವಲಯದ ಹಂಗಳೂರು ಎಂಬಲ್ಲಿ ನಡೆದಿದೆ.

ಬೆಳಿಗ್ಗೆ 7 ಗಂಟೆ ಬಳಿಕ ಈ ಘಟನೆ ನಡೆದಿದ್ದು, ಬಸ್ ಶುಚಿಗೊಳಿಸಿ ಸಿಬ್ಬಂದಿಗಳು ಬಸ್ಸಿನಿಂದ ಇಳಿದಿದ್ದರು. ಇದಾದ ಬಳಿಕ ಡಿಪೋದಿಂದ ಬಸ್ಸು ಮುಂದಕ್ಕೆ ಚಲಿಸಿ ಸರ್ವೀಸ್ ರಸ್ತೆಯಿಂದ ಎರಡು ಹೆದ್ದಾರಿ ದಾಟಿ ಮತ್ತೊಂದು ಸರ್ವೀಸ್ ರಸ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್ ಮುರಿದು ಸಾಗಿ ಹೋಟೆಲೊ‌ಂದರ ಎದುರು ನಿಂತಿದ್ದ ಕಾರಿಗೆ ಢಿಕ್ಕಿಯಾಗಿದೆ.

ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ವಾಹನಗಳು ಕಮ್ಮಿಯಿದ್ದರಿಂದ ಹಾಗೂ ಪಾದಾಚಾರಿಗಳು ಓಡಾಟವಿಲ್ಲದ ಕಾರಣ ಅದೃಷ್ಟವಶಾತ್ ಭಾರೀ ಅವಘಡ ತಪ್ಪಿದೆ ಎನ್ನಲಾಗಿದೆ. ಘಟನೆ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News