×
Ad

ಬಸ್‌ ಪ್ರಯಾಣದ ಮಧ್ಯೆ ಮಂಡ್ಯ ಮೂಲದ ವ್ಯಕ್ತಿ ಮೃತ್ಯು

Update: 2024-03-05 13:09 IST

ಹಾಸನ: ಮಾ,5: ಖಾಸಗಿ ಬಸ್‌ನಲ್ಲಿ ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.

ಮೃತ ವ್ಯಕ್ತಿಯನ್ನು‌ ಮಂಡ್ಯ ಜಿಲ್ಲೆಯ, ಇಲ್ಲೇನಹಳ್ಳಿ ಗ್ರಾಮದ ಟಿ.ಸ್ವಾಮಿ (39) ಎಂದು ಗುರುತಿಸಲಾಗಿದೆ. ಇವರು ಮುಂಬೈನಿಂದ ಮಂಡ್ಯಕ್ಕೆ ಸ್ಲೀಪರ್ ಕೋಚ್ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಚನ್ನರಾಯಪಟ್ಟಣದಲ್ಲಿ ವಿಶ್ರಾಂತಿಗೆಂದು ಬಸ್ ನಿಲ್ಲಿಸಿದಾಗ ಇತರ ಪ್ರಯಾಣಿಕರೆಲ್ಲರೂ ಕೆಳಗಿಳಿದರೂ ಸ್ವಾಮಿ ಮಾತ್ರ ಇಳಿದಿರಲಿಲ್ಲ. ಶೌಚಗೃಹ ಬಳಸಲಿ ಎಂದು ನಿರ್ವಾಹಕ ಅವರನ್ನು ತಟ್ಟಿ ಎಬ್ಬಿಸಲು ಯತ್ನಿಸಿದರೂ ಅವರು ಅಲ್ಲಾಡಲಿಲ್ಲ ಎನ್ನಲಾಗಿದೆ. ಅನುಮಾನಗೊಂಡು ಪರಿಶೀಲಿಸಿದಾಗ ಉಸಿರು ನಿಂತಿರುವುದು ತಿಳಿದು ಬಂದಿದ್ದು, ಹೃದಯಾಘಾತದಿಂದ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.

ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News