×
Ad

ಮಂಡ್ಯ| ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮೃತ್ಯು

Update: 2023-12-15 19:48 IST

ಮಂಡ್ಯ: ಕೆ.ಆರ್.ಪೇಟೆ ತಾಲೂಕು ಕಸಬಾ ಹೋಬಳಿ ಅರೆಬೂವನಹಳ್ಳಿ ಗ್ರಾಮದ ರೈತ ಮಂಜುನಾಥ ಅವರು ಕಡಿದು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಇಂತಹ ಘಟನೆಗಳು ತಾಲೂಕಿನಲ್ಲಿ ಮರುಕಳಿಸುತ್ತಿದ್ದು,  ಇಲಾಖೆಯವರು ಬೇಜವಾಬ್ಧಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ರೈತಸಂಘದ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಗ್ರಾಮಸ್ಥರು ಆರೋಪಿಸಿದರು.

ಮೃತರ ಪತ್ನಿ, ಮಕ್ಕಳು ಘಟನೆಯಿಂದ ಆಘಾತಗೊಂಡಿದ್ದಾರೆ. ಸೆಸ್ಕ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News