×
Ad

ʼಸಿಎಂ ಬದಲಾವಣೆʼ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಲಿ : ಕೆ.ಎನ್.ರಾಜಣ್ಣ ಆಗ್ರಹ

Update: 2026-05-07 17:29 IST

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಆಗ್ರಹಿಸಿದರು.

ನಗರದ ಟಿ.ಕೆ.ಲೇಔಟ್ ನಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನೆಗೆ ಗುರುವಾರ ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಮುಂದೆ ಬಂದು ರಾಜ್ಯದಲ್ಲಿರುವ ನಾಯಕತ್ವದ ಗೊಂದಲವನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಸರಕಾರ ಮತ್ತು ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಸಂಪುಟ ಪುನರ್ ರಚನೆಯಾದರೂ ಮಾಡಲಿ, ಅಥವಾ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಆಗಲಿ ಯಾವುದಾದರನ್ನು ಹೈಕಮಾಂಡ್ ಬೇಗ ನಿರ್ಧಾರ ಮಾಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಕಾಂಗ್ರೆಸ್ ಪಕ್ಷದಲ್ಲಿ ಒಂದು ಡಜನ್ ನಾಯಕರಿಗೆ ಅರ್ಹತೆ ಇದೆ. ಡಿ.ಕೆ.ಶಿವಕುಮಾರ್ ಆಸೆ ಪಡುವುದರಲ್ಲಿ ತಪ್ಪಿಲ್ಲ, ಸಿದ್ದರಾಮಯ್ಯ ಬದಲಾದರೆ ಕಾಂಗ್ರೆಸ್ ಗೆ ಕಷ್ಟವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಈ ವಿಚಾರವನ್ನು ಹೈಕಮಾಂಡ್ ತೀರ್ಮಾನ‌ ಮಾಡುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News