×
Ad

ಮೈಸೂರು | ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

Update: 2025-10-31 18:20 IST

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿಯ ಆರ್ಭಟ ಜೋರಾಗಿದ್ದು, ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಡೆದಿದೆ.

ಕೊಡಗಿ ಗ್ರಾಮದ ನಿಂಗಯ್ಯ (65) ಹುಲಿ ದಾಳಿಗೆ ಒಳಗಾಗಿ ಮೃತಪಟ್ಟ ವ್ಯಕ್ತಿ. ಶುಕ್ರವಾರ ಕಾಡಂಚಿನ ಗ್ರಾಮ ಸರಗೂರು ತಾಲ್ಲೂಕಿನ ಕರ್ಣೇಗಾಲದಲ್ಲಿ ನಿಂಗಯ್ಯ ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು, ನಿಂಗಯ್ಯ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸರಗೂರು ತಾಲ್ಲೂಕಿನಲ್ಲೇ ಐದು ದಿನಗಳ ಅಂತರದಲ್ಲಿ ಎರಡು ಹುಲಿ ದಾಳಿ ಪ್ರಕರಣಗಳು ವರದಿಯಾಗಿದೆ. ಇತ್ತೀಚೆಗೆ ಅಕ್ಟೋಬರ್ 26 ರಂದು ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವವರ ಮೇಲೆ ಹುಲಿ ದಾಳಿಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News