ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗುತ್ತೆ, ಮಹಿಳೆಯರು ಮಂಗಳ ಸೂತ್ರ ಕಳೆದುಕೊಳ್ಳುತ್ತಾರೆ : ಯತೀಂದ್ರ ಸಿದ್ಧರಾಮಯ್ಯ

Update: 2024-04-22 15:12 GMT

ಮೈಸೂರು : ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರ ಮಂಗಳ ಸೂತ್ರ ಮಾತ್ರ ಅಲ್ಲ, ತಮ್ಮ ಗಂಡಂದಿರು, ಮಕ್ಕಳನ್ನ ಕಳೆದುಕೊಳ್ಳುತ್ತಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ಕಾಂಗ್ರೆಸ್‌‍ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತದೆ ಎಂದು ನರೇಂದ್ರ ಮೋದಿ ಹೇಳಿಕೆ ಕುರಿತು ಸೋಮವಾರ ಮಾಧ್ಯದವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದರು.

ಬಿಜೆಪಿ ಕೋಮುಗಲಭೆ, ದೋಂಬಿ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತದೆ. ಒಬ್ಬರನ್ನೊಬ್ಬರು ಬಡಿದಾಡುವಂತೆ ಮಾಡುತ್ತಾರೆ. ಮಕ್ಕಳನ್ನು ಕೋಮು ಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಯಾಗಿ ಮಾಡುತ್ತಾರೆ ಎಂದು ಆರೋಪಿಸಿದರು.

ಪ್ರಧಾನಿಯಾದ ನರೇಂದ್ರ ಮೋದಿ ಅವರು ತುಚ್ಛವಾಗಿ ಮಾತನಾಡಿದ್ದಾರೆ. ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದೆ ಗೊತ್ತಿಲ್ಲ. 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಯಾವ ಹಿಂದೂಗೂ ಅನ್ಯಾಯವಾಗಿಲ್ಲ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ ಸೇಠ್‌ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತಯಾಚನೆ ವೇಳೆ ಕೀಳುಮಟ್ಟಕ್ಕೆ ಇಳಿದು ಮಾತನಾಡಿದ್ದಾರೆ. ಕರ್ನಾಟಕಕ್ಕೆ ಏನೂ ಸಿಗಲಿಲ್ಲ ಅಂದರೆ ಚೆಂಬು ಸಿಕ್ಕಿರೋದು ಅಂತಾ ಹೇಳಿದ್ದೇವೆ. ಆದರೆ, ಬಿಜೆಪಿಯವರು ಮುಸ್ಲಿಂರನ್ನು ಮುಂದಿಟ್ಟುಕೊಂಡು ತನ್ನ ರಾಜಕೀಯದ ಅಂಗಡಿ ಬಿಚ್ಚಿದ್ದಾರೆ. ಮುಸ್ಲಿಂ ಬಗ್ಗೆ ಮಾತಾಡುವುದನ್ನು ಬಿಟ್ಟರೆ ಬಿಜೆಪಿ ಅಸ್ತಿತ್ವ ಅವತ್ತೇ ಮುಗಿಯುತ್ತದೆ ಎಂದು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News