×
Ad

ಬ್ಯಾಂಕ್ ದರೋಡೆ: ಪ್ರಮುಖ ಆರೋಪಿಯನ್ನು ಬಂಧಿಸಿ 49 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡ ಪೊಲೀಸರು

Update: 2023-08-08 10:15 IST

Photo: Twitter@NDTV

ಬಾಲಸೋರ್ (ಒಡಿಶಾ): ಚಂದನೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ನಿಂದ ಎಪ್ರಿಲ್ 26 ರಂದು 49 ಲಕ್ಷ ರೂ. ನಗದು ಮತ್ತು ಚಿನ್ನವನ್ನು ಲೂಟಿ ಮಾಡಿದ ಪ್ರಮುಖ ಆರೋಪಿಯನ್ನು ಒಡಿಶಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಬೆಳವಣಿಗೆಯೊಂದರಲ್ಲಿ, ನೆರೆಯ ಪಶ್ಚಿಮ ಬಂಗಾಳದ ಉತ್ತರ 24 ಪರಗಣದಿಂದ ಪೊಲೀಸರು ಸೋಮವಾರ ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ್ದಾರೆ.

ಬ್ಯಾಂಕ್ ಡಕಾಯಿತಿಯಲ್ಲಿ ಒಟ್ಟು 14 ಮಂದಿ ಭಾಗಿಯಾಗಿದ್ದು, ಈ ಪೈಕಿ ನಾಲ್ವರು ಇಡೀ ಘಟನೆಯ ಮಾಸ್ಟರ್ ಮೈಂಡ್ ಆಗಿದ್ದಾರೆ ಎಂದು ಬಾಲಸೋರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಾಗರಿಕಾ ನಾಥ್ ಸುದ್ದಿಸಂಸ್ಥೆ ಎಎನ್ ಐಗೆ ತಿಳಿಸಿದ್ದಾರೆ.

"ನಾವು ಗುಂಪಿನ ಕಾರ್ಯವೈಖರಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಯಿತು. ಅವರು ಬಸ್ತಾದಲ್ಲಿ ಕನಿಷ್ಠ ಎರಡು ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ, ಭೋಗ್ರೈ ಹಾಗೂ ಪೂರ್ವ ಮತ್ತು ಪಶ್ಚಿಮ ಮೇದಿನಿಪುರ ಪ್ರದೇಶಗಳಲ್ಲಿ ತಲಾ 1 ಪ್ರಕರಣದಲ್ಲಿ ಶಾಮೀಲಾಗಿದ್ದಾರೆ” ಎಂದು ನಾಥ್ ಹೇಳಿದರು.

ಕ್ರಿಮಿನಲ್ ಗ್ಯಾಂಗ್ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿತ್ತು ಹಾಗೂ ಹೆಚ್ಚಾಗಿ ಬ್ಯಾಂಕುಗಳು ಮತ್ತು ಆಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಸಾರ್ವಜನಿಕ ಜಾಗೃತಿಗಾಗಿ ಪೊಲೀಸರು ಶೀಘ್ರದಲ್ಲೇ ಆರೋಪಿಗಳ ಚಿತ್ರಗಳನ್ನು ಬ್ಯಾಂಕ್ಗಳು ಮತ್ತು ಆಭರಣ ಅಂಗಡಿಗಳಲ್ಲಿ ಹಾಕುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News