ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಮಾದರಿಗಳ ಪರಿಶೀಲನೆ: ಗೃಹ ಸಚಿವ ಅಮಿತ್ ಶಾ ಸೂಚನೆ
Update: 2025-11-11 21:56 IST
Photo: ANI
ಹೊಸದಿಲ್ಲಿ: ದಿಲ್ಲಿಯ ಕೆಂಪುಕೋಟೆಯ ಬಳಿ ಸ್ಫೋಟಗೊಂಡ ಕಾರಿನಲ್ಲಿದ್ದ ಮೃತದೇಹಗಳ ಅವಶೇಷಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಹೋಲಿಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಐಎಲ್)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತನಿಖೆಯ ವಿವರಗಳನ್ನು ಸಾಧ್ಯವಿದ್ದಷ್ಟು ಶೀಘ್ರವೇ ನೀಡುವಂತೆ ಅವರು ತಿಳಿಸಿದ್ದಾರೆ.