×
Ad

LIVE | ಪಾಕಿಸ್ತಾನದಲ್ಲಿ ಉಗ್ರ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳಿಂದ ದಾಳಿ; ತಡರಾತ್ರಿ ನಡೆದ 'ಆಪರೇಷನ್ ಸಿಂಧೂರ್’

Update: 2025-05-07 06:09 IST

Screengrab: X/ANI

ಹೊಸದಿಲ್ಲಿ: 'ಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ.

‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯ ಪರಿಣಾಮವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಸ್ಫೋಟಗಳ ವರದಿಗಳು ಬಂದಿವೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದ ಸ್ವಲ್ಪ ಸಮಯದ ನಂತರ, ಭಾರತೀಯ ಸೇನೆಯು ಎಕ್ಸ್‌ ಪೋಸ್ಟ್‌ನಲ್ಲಿ “ನ್ಯಾಯ ದೊರಕಿತು. ಜೈ ಹಿಂದ್!” ಎಂದು ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್‌ನಲ್ಲಿ ‘ಭಾರತ್ ಮಾತಾ ಕಿ ಜೈ’ ಎಂದು ಬರೆದಿದ್ದಾರೆ.

ಪಾಕಿಸ್ತಾನದಲ್ಲಿ ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಸೇನಾ ದಾಳಿಗಳು ನಡೆದಿದೆ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೆಯೊಂದರಲ್ಲಿ, ಭಾರತೀಯ ವಾಯುಪಡೆಯು ಮುರಿಡ್ಕೆ ಮತ್ತು ಬಹಾವಲ್ಪುರದಲ್ಲಿನ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಮತ್ತು ಮುಜಫರಾಬಾದ್‌ನಲ್ಲಿರುವ ನಿಯಂತ್ರಣ ರೇಖೆಯಾದ್ಯಂತದ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದೆ ಎಂದು ತಿಳಿಸಿದೆ.

ದಾಳಿಗಳಿಂದಾಗಿ ಸಾವುನೋವುಗಳು ಸಂಭವಿಸಿದೆ ಎಂದು ಹೇಳಿಕೊಂಡ ಪಾಕಿಸ್ತಾನವು, "ತಾನು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ದಾಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲಿದೆ", ಎಂದು ತಿಳಿಸಿದೆ.

ದಾಳಿಗೆ ಕೆಲವೇ ನಿಮಿಷಗಳ ಮೊದಲು, ಭಾರತೀಯ ಸೇನೆಯು "ದಾಳಿಗೆ ಸಿದ್ಧ, ಗೆಲ್ಲಲು ತರಬೇತಿ ಪಡೆದಿದೆ" ಎಂಬ ಶೀರ್ಷಿಕೆಯೊಂದಿಗೆ X ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿತ್ತು.

PIBಯು ಬೆಳಗಿನ ಜಾವ 1:44 ಕ್ಕೆ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಆಪರೇಷನ್ ಸಿಂಧೂರ್ ಬಗ್ಗೆ ವಿವರಗಳನ್ನು ಹಂಚಿಕೊಂಡಿದೆ.

ಬೆಳಗಿನ ಜಾವ 1:51 ಕ್ಕೆ, ಭಾರತೀಯ ಸೇನೆಯು X ನಲ್ಲಿ, "ನ್ಯಾಯವನ್ನು ಸಲ್ಲಿಸಲಾಗಿದೆ. ಜೈ ಹಿಂದ್!", ಎಂದು ಪೋಸ್ಟ್ ಮಾಡಿತು.

Live Updates
2025-05-07 02:06 GMT

ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಾಯುಪ್ರದೇಶದ ನಿರ್ಬಂಧಗಳ ನಡುವೆ, ಭಾರತೀಯ ವಿಮಾನಯಾನ ಸಂಸ್ಥೆಗಳು ಜಮ್ಮು ಮತ್ತು ಶ್ರೀನಗರ ಸೇರಿದಂತೆ ವಿವಿಧ ನಗರಗಳ ನಡುವಿನ ಅಲ್ಲಿಂದ ಹಾರಾಟವನ್ನು ರದ್ದುಗೊಳಿಸಿದೆ.

2025-05-07 02:05 GMT

ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ನನಗೆ ತಿಳಿದಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತದ ವೈಮಾನಿಕ ದಾಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪರಿಸ್ಥಿತಿಯನ್ನು ನಾಚಿಕೆಗೇಡಿನ ಸಂಗತಿ ಎಂದರು.

ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದ ಅವರು, "ಎರಡು ಪ್ರಬಲ ರಾಷ್ಟ್ರಗಳು ಆ ಹಾದಿಯಲ್ಲಿ ಸಾಗುವುದನ್ನು ಯಾರೂ ನೋಡಲು ಬಯಸುವುದಿಲ್ಲ. ಇದು ಬೇಗನೇ ಕೊನೆಗೊಳ್ಳಲಿ", ಎಂದು ಹೇಳಿದರು.

2025-05-07 02:05 GMT

ಭಾರತ-ಪಾಕ್ ಪರಿಸ್ಥಿತಿಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ

2025-05-07 02:05 GMT

ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಬುಧವಾರ ಮುಚ್ಚಲಾಗಿದೆ. ಪಠಾಣ್‌ ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳನ್ನು 72 ಗಂಟೆಗಳ ಅವಧಿಗೆ ಮುಚ್ಚಲಾಗಿದೆ.

2025-05-07 02:04 GMT

ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯು ಬೆಳಿಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News