×
Ad

ದಿಲ್ಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಭುವನೇಶ್ವರದಲ್ಲಿ ತುರ್ತು ಭೂಸ್ಪರ್ಶ

Update: 2023-09-04 13:23 IST

Photo: Twitter

ಭುವನೇಶ್ವರ: ದಿಲ್ಲಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದ ಕಾರಣ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಇಂಡಿಗೋ ವಿಮಾನ 6E2065 ಭುವನೇಶ್ವರ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಆದರೆ ಸ್ವಲ್ಪ ಸಮಯದ ನಂತರ ತುರ್ತು ಲ್ಯಾಂಡಿಂಗ್ ಮಾಡಿತು.

ಪ್ರಯಾಣಿಕರಿಗೆ ಪರ್ಯಾಯ ವಿಮಾನ ಆಯ್ಕೆಗಳನ್ನು ನೀಡಲಾಯಿತು.

ಎರಡು ವಾರಗಳ ಹಿಂದೆ ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಮತ್ತೊಂದು ಇಂಡಿಗೋ ವಿಮಾನವು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೇವಾನಂದ್ ತಿವಾರಿ ಎಂಬುವರು ರಕ್ತ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರು. ಪ್ರಯಾಣಿಕನನ್ನು ಇಳಿಸಿದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News