×
Ad

"ಬೇಜವಾಬ್ದಾರಿಯ ಧೋರಣೆ": ರಾಮದೇವ್‌ ಗೆ ಸುಪ್ರೀಂ ಕೋರ್ಟ್‌ ತರಾಟೆ

Update: 2024-04-16 12:19 IST

 ಬಾಬಾ ರಾಮದೇವ್‌ | PC : PTI 

ಹೊಸದಿಲ್ಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಇಂದು ಪತಂಜಲಿ ಸಂಸ್ಥೆಯ ಸ್ಥಾಪಕರಾದ ಯೋಗ ಗುರು ರಾಮದೇವ್‌ ಮತ್ತು ಬಾಲಕೃಷ್ಣ ಅವರು ಇಂದು ಸುಪ್ರೀಂ ಕೋರ್ಟಿಗೆ ಹಾಜರಾಗಿದ್ದು ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ವೇಳೆ ಯೋಗಗುರು ರಾಮದೇವ್‌ ಅವರ “ಬೇಜವಾಬ್ದಾರಿಯ ಧೋರಣೆ” ಕುರಿತಂತೆ ಸುಪ್ರೀಂ ಕೋರ್ಟ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್‌ ಅಮಾನುಲ್ಲಾ ಅವರ ಪೀಠ ಎಪ್ರಿಲ್‌ 23ಕ್ಕೆ ನಿಗದಿಪಡಿಸಿದೆ.

ಇದಕ್ಕೂ ಮುಂಚೆ ಎಪ್ರಿಲ್‌ 10ರಂದು ನಡೆದ ವಿಚಾರಣೆ ವೇಳೆ ರಾಮದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರ ಭೇಷರತ್‌ ಕ್ಷಮೆಯನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತಲ್ಲದೆ ಅವರ ಕೃತ್ಯಗಳು ಉದ್ದೇಶಪೂರ್ವಕ ಹಾಗೂ ಸತತ ಉಲ್ಲಂಘನೆಗಳನ್ನು ಮಾಡಲಾಗಿದೆ ಎಂದು ಹೇಳಿತ್ತು.

ನ್ಯಾಯಾಂಗ ನಿಂದನೆ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದಕ್ಕೂ ನ್ಯಾಯಾಲಯ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿತ್ತಲ್ಲದೆ ಅವರು ಸಲ್ಲಿಸಿದ್ದ ಅಫಿಡವಿಟ್‌ನಿಂದ ಸಮಾಧಾನವಾಗಿಲ್ಲ ಎಂದು ಹೇಳಿತ್ತು.

ಪತಂಜಲಿ ಆಯುರ್ವೇದದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News