×
Ad

ಕರೂರ್‌ ಕಾಲ್ತುಳಿತ ಪ್ರಕರಣ | 10 ದಿನಗಳಲ್ಲಿ ಎಸ್‌ಒಪಿ ರೂಪಿಸುವಂತೆ ತಮಿಳುನಾಡು ಸರಕಾರಕ್ಕೆ ಮದ್ರಾಸ್ ಹೈಕೋರ್ಟ್‌ ಸೂಚನೆ

Update: 2025-10-27 15:49 IST

Photo : PTI 

ಚೆನ್ನೈ: ರಾಜಕೀಯ ಪಕ್ಷಗಳು ನಡೆಸುವ ರೋಡ್ ಶೋಗಳು, ರ‍್ಯಾಲಿಗಳು ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು(ಎಸ್‌ಒಪಿ) 10 ದಿನಗಳ ಒಳಗಾಗಿ ರೂಪಿಸುವಂತೆ ತಮಿಳುನಾಡು ಸರಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.

ಸೆಪ್ಟೆಂಬರ್ 27ರಂದು ನಟ ವಿಜಯ್ ಅವರ ಟಿವಿಕೆ ಪಕ್ಷದ ರೋಡ್ ಶೋ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು. ಈ ಪ್ರಕರಣದ ಕುರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್ ಜೆ. ರವೀಂದ್ರನ್ ಅವರು, ಎಸ್‌ಒಪಿ ರೂಪಿಸುವವರೆಗೆ ಯಾವುದೇ ರಾಜಕೀಯ ಪಕ್ಷಗಳಿಗೆ ರ‍್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಆದರೆ, ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ತಡೆಯಲಾಗುವುದಿಲ್ಲ ಎಂದು ಹೇಳಿದರು.

ಎಸ್‌ಒಪಿ ಕರಡನ್ನು ಯಾವಾಗ ರೂಪಿಸಲಾಗುತ್ತದೆ ಎಂದು ಪೀಠವು ಎಎಜಿಯನ್ನು ಕೇಳಿದಾಗ, ರಾಜ್ಯ ಸರಕಾರ ಪೊಲೀಸ್‌ ಇಲಾಖೆ, ಅಗ್ನಿಶಾಮಕ ಇಲಾಖೆ, ನಾಗರಿಕ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮಾಲೋಚಿಸಿ ಎಸ್‌ಒಪಿ ರೂಪಿಸಲಿದೆ. ಇದಕ್ಕೆ ಹೆಚ್ಚಿನ ಸಮಾಯಾವಕಾಶ ಬೇಕು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News