ಉತ್ತರಖಂಡ | ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂಕುಸಿತ : ಓರ್ವ ಮೃತ್ಯು, ಐವರಿಗೆ ಗಾಯ
Update: 2025-05-31 10:24 IST
Photo | newindianexpress
ಡೆಹ್ರಾಡೂನ್: ಉತ್ತರಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತನನ್ನು ರಾಜೇಶ್ ಸಿಂಗ್ ರಾವತ್ ಎಂದು ಗುರುತಿಸಲಾಗಿದೆ. ಅವರು ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಲಂಬಗಾಂವ್ ನಿವಾಸಿಯಾಗಿದ್ದಾರೆ.
ಗುಪ್ತಕಾಶಿಯ ಬಳಿಯ ಕುಂಡ್ ಬಳಿ ಛತ್ತೀಸ್ಗಢದಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ವಾಹನವು ಭೂಕುಸಿತಕ್ಕೆ ಸಿಲುಕಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದೆ. ಗಾಯಾಳುಗಳನ್ನು ಸ್ಥಳೀಯ ಆಗಸ್ಟ್ಮುನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.