×
Ad

ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

Update: 2024-06-04 07:27 IST
Live Updates - Page 6
2024-06-04 08:48 GMT

ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 45,329 ಮತಗಳ ಭರ್ಜರಿ ಮುನ್ನಡೆ

ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 45,329 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 2,25,058 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,79,729 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,12,990 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.

2024-06-04 08:40 GMT

ವಿಜಯಪುರದಲ್ಲಿ ಕಾಂಗ್ರೆಸ್‌ನ ರಾಜೂ ಅಲಗೂರು ವಿರುದ್ಧ ಬಿಜೆಪಿಯ ರಮೇಶ್‌ ಜಿಗಜಿಣಗಿ ಗೆಲುವು

2024-06-04 08:34 GMT

ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್‌ ವಿರುದ್ಧ ಪ್ರಭಾ ಮಲ್ಲಿಕಾರ್ಜುನ್‌ಗೆ ಜಯ

2024-06-04 08:31 GMT

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು

2024-06-04 08:23 GMT

ಕಲಬುರಗಿಯಲ್ಲಿ ಉಮೇಶ್‌ ಜಾದವ್‌ ವಿರುದ್ಧ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

2024-06-04 08:20 GMT

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಬಿಜೆಪಿಯ ದಿಲೀಪ್ ಘೋಷ್ ಗೆ ಹಿನ್ನಡೆ. ಟಿಎಂಸಿಯ ಕೀರ್ತಿ ಆಜಾದ್ ಗೆ 82,954 ಮತಗಳಿಂದ ಮುನ್ನಡೆ

2024-06-04 08:19 GMT

ಸುರಪುರ ಉಪಚುನಾವಣೆ | ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್ ವಿರುದ್ಧ ರಾಜುಗೌಡಗೆ ಸೋಲು

2024-06-04 08:19 GMT

ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಗೆ 75155 ಮತಗಳ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 75155 ಮತಗಳ ಮುನ್ನಡೆ ಗಳಿಸಿದ್ದಾರೆ.

ಮನ್ಸೂರ್ ಅಲಿ ಖಾನ್ 478888 ಮತಗಳನ್ನು ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ 403733

ಮತಗಳನ್ನು ಗಳಿಸಿದ್ದಾರೆ.

2024-06-04 08:19 GMT

ತಿರುವಳ್ಳೂರು ಕ್ಷೇತ್ರದಲ್ಲಿ 2.25 ಲಕ್ಷ ಮತಗಳಿಂದ ಕಾಂಗ್ರೆಸ್‌ ಅಭ್ಯರ್ಥಿ ಸಸಿಕಾಂತ್‌ ಸೆಂಥಿಲ್‌ ಗೆ ಮುನ್ನಡೆ

2024-06-04 08:17 GMT

ಪ್ರಧಾನಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು : ಜೈರಾಂ ರಮೇಶ್‌

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News