ಉಪಚುನಾವಣೆ ಫಲಿತಾಂಶ | ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ ಗೆ 5,000ಕ್ಕೂ ಅಧಿಕ ಮತಗಳ ಮುನ್ನಡೆ; ದಾಟಿಯಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

Update: 2026-08-03 13:13 IST

Photo |ANI

ಹೊಸದಿಲ್ಲಿ: ಬಿಹಾರದ ಬಂಕಿಪುರ, ಮಧ್ಯಪ್ರದೇಶದ ದಾಟಿಯಾ ಹಾಗೂ ಗುಜರಾತ್‌ ನ ಮಂಜಲ್ಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸೋಮವಾರ ಮುಂದುವರಿದಿದ್ದು, ಆರಂಭಿಕ ಪ್ರವೃತ್ತಿಗಳಲ್ಲಿ ಬಂಕಿಪುರದಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ 5,000ಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗ (ECI) ಪ್ರಕಟಿಸಿರುವ ಆರಂಭಿಕ ಮತ ಎಣಿಕೆ ಪ್ರವೃತ್ತಿಗಳ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಹಿನ್ನಡೆಯಲ್ಲಿದ್ದಾರೆ.

ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘನಶ್ಯಾಮ್ ಸಿಂಗ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗುಜರಾತ್‌ನ ಮಂಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿಯೂ ಮತ ಎಣಿಕೆ ಮುಂದುವರಿದಿದ್ದು, ವಿವಿಧ ಸುತ್ತುಗಳ ಫಲಿತಾಂಶಗಳು ಪ್ರಕಟವಾಗುತ್ತಿವೆ.

ಬಂಕಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಿತಿನ್ ನಬಿನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು. ಜುಲೈ 30ರಂದು ಮತದಾನ ನಡೆದಿದ್ದು, ಬಿಜೆಪಿ, ಜನ ಸುರಾಜ್ ಪಕ್ಷ ಹಾಗೂ ಆರ್‌ಜೆಡಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.

ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರಿಗೆ ಈ ಉಪಚುನಾವಣೆ ಪ್ರತಿಷ್ಠೆಯ ಕಣವೆಂದು ಪರಿಗಣಿಸಲಾಗಿತ್ತು. ಕ್ಷೇತ್ರ ಖಾಲಿಯಾದ ಬಳಿಕ ಅವರು ಸ್ಪರ್ಧೆಗೆ ಇಳಿದಿದ್ದರು. ಅವರ ವಿರುದ್ಧ ಬಿಜೆಪಿ ನೀರಜ್ ಕುಮಾರ್ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು.

ಆರಂಭಿಕ ಮತ ಎಣಿಕೆ ಪ್ರವೃತ್ತಿಗಳಲ್ಲಿ ಪ್ರಶಾಂತ್ ಕಿಶೋರ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಅಂತಿಮ ಫಲಿತಾಂಶದತ್ತ ರಾಜಕೀಯ ವಲಯ ಗಮನ ಹರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News