ತಿರುಪತಿ: ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ
Update: 2023-06-16 18:16 IST
ಸಾಂದರ್ಭಿಕ ಚಿತ್ರ, Photo: Twitter
ಹೊಸದಿಲ್ಲಿ: ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದೀಗ ಬೆಂಕಿ ಹತೋಟಿಗೆ ಬಂದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ದೇವಸ್ಥಾನದ ಸಮೀಪವಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ಎನ್ಡಿಟಿವಿಗೆ ತಿಳಿಸಿದ್ದಾರೆ.