×
Ad

Mangaluru | ಮೇ 15ರಿಂದ 17ರವರೆಗೆ ಕನ್ನಡ ಟೆಲಿಚಿತ್ರ ಮೊನಾಲಿಸಾ- ಇಸ್ ಇನ್ ಟ್ರಬಲ್’ ಪ್ರೀಮಿಯರ್ ಶೋ

Update: 2026-05-14 15:26 IST

ಮಂಗಳೂರು, ಮೇ 14: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಪ್ರೀಮಿಯರ್ ಪ್ರದರ್ಶನ ಮೇ 15ರಿಂದ 17ರ ವರೆಗೆ ಮಂಗಳೂರಿನ ಭಾರತ್ ಸಿನೆಮಾಸ್ನಲ್ಲಿ ನಡೆಯಲಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಚಿತ್ರ ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ, ಸುಮಾರು 50 ನಿಮಿಷಗಳ ಈ ಟೆಲಿಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದರು.

ಯುವ ಪ್ರತಿಭೆಗಳಿಗೆ ಉತ್ತಮ ಸಂದೇಶ ನೀಡುವ ಕಥಾ ಹಂದರ ಹೊಂದಿರುವ ಚಿತ್ರವು ಥ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಕಥೆಯನ್ನು ಶ್ರೇಯಸ್ ಕುಮಾರ್ ಫರಂಗಿಪೇಟೆ ಬರೆದಿದ್ದು, ಮಂಗಳೂರಿನ ಸುತ್ತಮುತ್ತಲಲ್ಲಿ ಚಿತ್ರೀಕರಣಗೊಂಡಿದೆ. ರಂಗಿತರಂಗ ಖ್ಯಾತಿಯ ಕಾರ್ತಿಕ್ ವಿ.ಆರ್., ಯಜ್ಞೇಶ್ ಬರ್ಕೆ ಈ ಟೆಲಿಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶ್ರೇಯಸ್ ಕುಮಾರ್ ಫರಂಗಿಪೇಟೆ, ನಿರ್ಮಾಪಕ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದಿನೇಶ್ ಕೋಟ್ಯಾನ್, ದೇವಿ ಪ್ರಸಾದ್ ಕೊಂಚಾಡಿ, ಅಭಿನವ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News