×
Ad

ರಾಯಚೂರು : ವಿಷಪೂರಿತ ಸೇಂದಿ ಮಾರಾಟ; ಓರ್ವನ ಬಂಧನ

Update: 2026-05-09 13:10 IST

ರಾಯಚೂರು, ಮೇ 8:  ವಿಷಪೂರಿತ ಸಿ.ಹೆಚ್ ಪೌಡರ್ ಮಿಶ್ರಿತ ಸೇಂದಿಯನ್ನು ಸಾರ್ವಜನಿಕವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನೇತಾಜಿ ನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹರಿಜನವಾಡ ನಿವಾಸಿ ತಾಯಪ್ಪ (52) ಬಂಧಿತ ಆರೋಪಿ. ಶುಕ್ರವಾರ ಬೆಳಿಗ್ಗೆ ಪಟ್ರೋಲಿಂಗ್ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ, ಠಾಣಾ ವ್ಯಾಪ್ತಿಯ ಬೋಳಮಾನದೊಡ್ಡಿ ರಸ್ತೆಯ ಕೃಷ್ಣ ದೇವಸರಾಯ ಕಾಲೋನಿಯ ಏಗನೂರು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ.

ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 39/2026 ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್) ಕಲಂ 123, 275, 286 ಹಾಗೂ ಅಬಕಾರಿ ಕಾಯ್ದೆಯ 32 ಮತ್ತು 34ನೇ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News