×
Ad

ಅಖಿಲ ಭಾರತ ಕಾರ್ಮಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಎಐಸಿಸಿಟಿಯು ಕರೆ

Update: 2026-01-19 13:48 IST

ರಾಯಚೂರು: ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ - ಶಾಂತಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನ‌ರ್ ಸ್ಥಾಪಿಸಿ ಬಲಪಡಿಸಿ, ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ಹಿಂಪಡೆಯಿರಿ ಮತ್ತು ಬೀಜ ಮಸೂದೆ ವಿರೋಧಿಸಿ ಫೆಬ್ರವರಿ 12 ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ದುಡಿಯುವ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಎಐಸಿಸಿಟಿಯು ಸಂಘಟನೆ ಜಿಲ್ಲಾಧ್ಯಕ್ಷ ಅಜೀಜ್ ಜಾಗೀರ್ದಾರ್ ಕರೆ ನೀಡಿದರು.

ರಾಯಚೂರು ತಾಲೂಕಿನ ಅರಳಿಬೆಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎಐಸಿಸಿಟಿಯು ಸಂಘಟನೆ ಹಾಗೂ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ವತಿಯಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮುಷ್ಕರದ ಪೂರಕವಾಗಿ ಜನಜಾಗೃತಿ, ಕರಪತ್ರ ಹಂಚಿ ಪ್ರಚಾರಾಂದೋಲನ ನಡೆಸಿದರು.

ದುಡಿಯುವ ವರ್ಗಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನುಗಳನ್ನು ಜಾರಿ ಮಾಡದೆ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ಕಾನೂನು ಜಾರಿ ಮಾಡಿ ದುಡಿಯುವ ವರ್ಗಗಳ ಜನರನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಈ ಕಾನೂನುಗಳ ರದ್ದತಿಗಾಗಿ ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ.

ಈ ಬೇಡಿಕೆಗಳಷ್ಟೇ ಅಲ್ಲದೆ ನೂತನ ಶಿಕ್ಷಣ ನೀತಿ, ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ, ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪನೆ, ಕೆಲಸದ ಅವಧಿ 12ಗಂಟೆಗೆ ವಿಸ್ತರಣೆ ಸೇರಿ ವಿವಿಧ ಆದೇಶಗಳನ್ನು ಧಿಕ್ಕರಿಸಿ ದೇಶದ ಎಲ್ಲ ಭಾಗಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ. ರಾಯಚೂರು ತಾಲೂಕಿನ ಅತ್ಯಂತ ಕೂಡ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದ್ದು, ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ದುಡಿಯುವ ವರ್ಗದವರು ಭಾಗವಹಿಸುವ ಮೂಲಕ ಮುಷ್ಕರ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ:ನಾಗೇಂದ್ರ, ನರಸಪ್ಪ, ಈರಣ್ಣ, ಸಣ್ಣ ತಾಯಪ್ಪ, ಯಲ್ಲಪ್ಪ,ದೇವರಾಜ, ನರಸಿಹಲು, ಆಂಜನೇಯ.ವೆಂಕಟೇಶ್, ತಿಪ್ಪಣ್ಣ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News