×
Ad

ಮಾನ್ವಿ | ರಸ್ತೆ ಅಪಘಾತದಲ್ಲಿ ನಿವೃತ್ತ ಉಪತಹಶಿಲ್ದಾರ್ ಸಿದ್ದಲಿಂಗಪ್ಪ ಮೃತ್ಯು

Update: 2025-12-30 22:03 IST

ಮಾನ್ವಿ : ಪಟ್ಟಣದ ಮಾನ್ವಿ–ಸಿಂಧನೂರು ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯನಗರ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಸಿದ್ದಲಿಂಗಪ್ಪ (75) ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಿದ್ದಲಿಂಗಪ್ಪ ಅವರನ್ನು ತಕ್ಷಣವೇ ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ದ್ವಿಚಕ್ರವಾಹನ ಸವಾರ ಯಾಸಿನ್ ಎಂಬವರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಎ.ಎಸ್.ಐ. ಶಿವಲಿಂಗಪ್ಪ ಅವರು ಕೈಗೊಂಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News