×
Ad

ರಾಯಚೂರು | ಪ್ರಾಮಾಣಿಕತೆ ಮೈಗೂಡಿಸಿಕೊಳ್ಳುವುದಾಗಿ ಅಧಿಕಾರಿಗಳು ವಚನ ಕೊಟ್ಟಿದ್ದಾರೆ: ಉಪ ಲೋಕಾಯುಕ್ತ ಬಿ.ವೀರಪ್ಪ

Update: 2025-08-31 20:06 IST

ಬಿ ವೀರಪ್ಪ

ರಾಯಚೂರು: ಪ್ರಾಮಾಣಿಕತೆಯಿಂದ ಕೆಲಸ ಮಾಡುವುದಾಗಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತು ಕೊಟ್ಟಿದ್ದಾರೆ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪ ಅವರು ಹೇಳಿದರು.

ಆಗಸ್ಟ್ 30 ರಂದು ಸಂಜೆ ಕೃಷಿ ವಿವಿಯ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಭ್ರಷ್ಟಾಚಾರ ತಡೆಯಲು ಕೈಜೋಡಿಸಿ’ ಎನ್ನುವ ಲೋಕಾಯುಕ್ತ ಅಧಿಕಾರಿಗಳ ದೂರವಾಣಿ ಮತ್ತು ಲೋಕಾಯುಕ್ತ ಕಚೇರಿಯ ವಿಳಾಸ ಹೊಂದಿದ ಫಲಕಗಳನ್ನು ಎಲ್ಲ ಕಚೇರಿಗಳಲ್ಲು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈಗಾಗಲೇ ಬಹುತೇಕ ಕಚೇರಿಗಳಲ್ಲಿ ಈ ಫಲಕ ಅಳವಡಿಸಲಾಗಿದೆ ಎಂದರು.

ಕಚೇರಿ ಕಾರ್ಯದಲ್ಲಿ ಶಿಸ್ತು ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಶ್ರದ್ಧೆ ಇದ್ದಾಗ ಕಚೇರಿಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಡೆದು ಜನತೆಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತದೆ. ಈ ರೀತಿ ಬದಲಾವಣೆ ಆಗುವ ವಿಶ್ವಾಸವನ್ನು ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ ಎಂದು ಉಪ ಲೋಕಾಯುಕ್ತರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News