×
Ad

ರಾಯಚೂರು: ಡಿ.ಸಿ.‌‌ ಕಚೇರಿಗೆ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

Update: 2025-05-02 14:27 IST

ರಾಯಚೂರು: ರಾಯಚೂರಿನ ಹೊರವಲಯದ ಎಕ್ಲಾಸಪೂರು‌ ಬಡಾವಣೆಯಲ್ಲಿ ‌ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಈಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯಿಂದ ಹೊರಗೆ ಬಂದಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಯವರಿಗೆ ಈಮೇಲ್ ಸಂದೇಶ ಬಂದಿದ್ದು ಮಾಹಿತಿ ಪಡೆಯುತ್ತಿದ್ದಂತೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಚೇರಿಯಿಂದ ಓಡಿ ಹೊರಬಂದರು. ಮಾಹಿತಿ ಪಡೆಯುತ್ತಿದ್ದಂತೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ 1 ಗಂಟೆಯವರೆಗೆ ಸರ್ಕಾರಿ ಕಚೇರಿಗಳ ಸಮಯ ನಿಗದಿ ಮಾಡಿದ್ದರಿಂದ ಸ್ವಲ್ಪ ಮುಂಚಿತವಾಗಿಯೇ ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ್ದಾರೆ.

ಈಮೇಲ್ ಬಂದಿರುವುದನ್ನು ಎಸ್ ಪಿ ಎಂ.ಪುಟ್ಟಮಾದಯ್ಯ ಖಚಿತಪಡಿಸಿದ್ದು, ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News