Raichur | ಜಾತಿ ನಿಂದನೆ ಆರೋಪ : ಶಿಕ್ಷಕಿಯಿಂದ ಬಿಇಒಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯ

Update: 2026-08-13 14:37 IST

ರಾಯಚೂರು: ನಗರದ ಸಿಯಾತಲಾಬ್ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅರುಣಾ ಅವರನ್ನು ಅದೇ ಶಾಲೆಯ ಶಿಕ್ಷಕಿ ಜ್ಯೋತಿ ಲಕ್ಷ್ಮೀ ಅವರು ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಅರುಣಾ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದು, ತರಗತಿಯಲ್ಲಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದ ಸಂದರ್ಭದಲ್ಲಿ ಜ್ಯೋತಿ ಲಕ್ಷ್ಮೀ ಅವರು ಬಂದು ತಾವು ಹೇಳಿದ ತರಗತಿಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ತಾವು ಮಾನಸಿಕವಾಗಿ ನೊಂದಿದ್ದು, ಘಟನೆಗೆ ಕಾರಣರಾದ ಶಿಕ್ಷಕಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

"ಸಣ್ಣಪುಟ್ಟ ವಿಚಾರಕ್ಕೆ ಶಿಕ್ಷಕರು ಜಗಳವಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಸಂಯೋಜನಾಧಿಕಾರಿ ಮಲ್ಲಿಕಾರ್ಜುನ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ತನಿಖಾ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು."

- ಈರಣ್ಣ ಕೋಸಗಿ, ಕ್ಷೇತ್ರ ಶಿಕ್ಷಣಾಧಿಕಾರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News