×
Ad

Raichur | ಸೇವಾ ನಿವೃತ್ತ ಉಪನ್ಯಾಸಕ ಮಂಜುನಾಥ ಐಲಿ ಅವರಿಗೆ ಅಭಿನಂದನಾ ಸಮಾರಂಭ

Update: 2026-07-05 17:45 IST

ರಾಯಚೂರು: ಉಪನ್ಯಾಸಕ ವೃತ್ತಿಯ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ವ್ಯಕ್ತಿತ್ವ ಮಂಜುನಾಥ ಐಲಿ ಅವರದು ಎಂದು ಕೋಟೆ ಅಧ್ಯಯನ ಸಮಿತಿಯ ಗೌರವಾಧ್ಯಕ್ಷ ಜಯಣ್ಣ ಹೇಳಿದರು.

ನಗರದ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ ಕೋಟೆ ಅಧ್ಯಯನ ಸಮಿತಿ ವತಿಯಿಂದ ಆಯೋಜಿಸಿದ್ದ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಜುನಾಥ ಐಲಿ ಅವರು ಉಪನ್ಯಾಸಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋಟೆ ಅಧ್ಯಯನ ಸಮಿತಿಯೊಂದಿಗೆ ಅವರ ಸೇವೆ ಗಮನಾರ್ಹವಾಗಿದ್ದು, ವಿದ್ಯಾರ್ಥಿಗಳಿಗೆ ಇತಿಹಾಸ ಬೋಧಿಸುವುದರೊಂದಿಗೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯಲ್ಲೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಮಹಾಂತೇಶ್ ಮಸ್ಕಿ ಮಾತನಾಡಿ, ಇತಿಹಾಸ ಉಪನ್ಯಾಸಕರಾಗಿ ಮಂಜುನಾಥ ಐಲಿ ಅವರು ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಅವರ ಸೇವಾ ಮನೋಭಾವ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಹಿರಿಯ ಸಾಹಿತಿ ವೀರಹನುಮಾನ ಮಾತನಾಡಿ, ಮಂಜುನಾಥ ಐಲಿ ಅವರು ತಮ್ಮ ವೃತ್ತಿಜೀವನದೊಂದಿಗೆ ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳು ಇತಿಹಾಸ ವಿಷಯದಲ್ಲಿ ಉತ್ತಮ ಸಾಧನೆ ಮಾಡಲು ಅವರು ಅಪಾರ ಶ್ರಮವಹಿಸಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆ ಅಧ್ಯಯನ ಸಮಿತಿ ಅಧ್ಯಕ್ಷ ಕೆ. ಸತ್ಯನಾರಾಯಣ ವಹಿಸಿದ್ದರು. ಬಳಿಕ ಮಂಜುನಾಥ ಐಲಿ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಸೋಮಶೇಖರ ಹೊಕ್ರಾಣಿ, ನರಸಪ್ಪ ಬಂಡಾರಿ, ಕುಮಾರ ಐಲಿ, ನಾಗೇಂದ್ರಪ್ಪ, ಬಿ.ಜಿ. ಹುಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News