×
Ad

ರಾಯಚೂರು | ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿಯ ಬಂಧನ

Update: 2025-08-18 21:40 IST

ರಾಯಚೂರು: ಲಿಂಗಸುಗೂರು ತಾಲೂಕಿನಲ್ಲಿ‌ ನಡೆದ ಆಭರಣ‌ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಪೋತರಾಜ್ (35 ) ಬಂಧಿತ ಆರೋಪಿ. ಆರೋಪಿಯಿಂದ 36 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಕಳೆದ ಜುಲೈ 09ರಂದು ವೆಂಕಟೇಶ ಎಂಬವರು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆಗೆ ಲಿಂಗಸುಗೂರು ಪಿಎಸ್ ಐ ನೇತೃತ್ವದಲ್ಲಿ  ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News