×
Ad

ರಾಯಚೂರು | ಪಾಲಿಕೆ ಆಯುಕ್ತರಾಗಿ ಜುಬೇನ್‌ ಅಧಿಕಾರ ಸ್ವೀಕಾರ

Update: 2025-01-29 21:31 IST

ಜುಬೇನ್ ಮೋಹಪಾತ್ರ

ರಾಯಚೂರು : ಮಹಾನಗರ ಪಾಲಿಕೆಯ ನೂತನ ಕಚೇರಿಯಲ್ಲಿ ಪಾಲಿಕೆಯ ಆಯುಕ್ತರಾಗಿ ಜುಬೇನ್ ಮೋಹಪಾತ್ರನ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕಚೇರಿ ಯಕ್ಲಾಸಪುರ ಬಡಾವಣೆಗೆ ಸ್ಥಳಾಂತರವಾದ ಕಾರಣ ಹಳೆಯ ಕಚೇರಿಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದು, ಇಂದು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಯುಕ್ತರು ಕಟ್ಟಡದ ಸೌಲಭ್ಯಗಳನ್ನು ವೀಕ್ಷಿಸಿ, ಸ್ಥಳಾಂತರ ಪ್ರಕ್ರಿಯೆ ಸರಾಗವಾಗಿ ಮುಗಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಜಾನನ ಬಾಳೆ, ಪಾಲಿಕೆಯ ಉಪ ಆಯುಕ್ತ ಗುರುಸಿದ್ದಯ್ಯ ಹಿರೆಮಠ, ವಲಯ ಆಯುಕ್ತ ಮಹೆಬೂಬ್ ಜಿಲಾನಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News