×
Ad

ರಾಯಚೂರು | ಜು.26ರಂದು ಕನ್ನಡ ಭಾಷಾ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ

Update: 2025-07-25 22:23 IST

ರಾಯಚೂರು : ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 13-3-2024ರಂದು ಅಧಿಸೂಚಿಸಿರುವ ವಿವಿಧ ಇಲಾಖೆಗಳ ಹೈ.ಕ.ವೃಂದದ ಗ್ರೂಪ್ ಬಿ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯು ರಾಯಚೂರು ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಜು.26ರಂದು ನಡೆಯಲಿದೆ.

ಈ ಪರೀಕ್ಷೆಯು ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ್‌ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News