ರಾಯಚೂರು| ವಿಷಪೂರಿತ ನೀರು ಕುಡಿದು 50ಕ್ಕೂ ಅಧಿಕ ಕುರಿಗಳು ಸಾವು
Update: 2025-12-27 18:58 IST
ರಾಯಚೂರು: ವಿಷಪೂರಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆೆ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ನಡೆದಿದೆ.
ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಎಂಬವರಿಗೆ ಸೇರಿದ 100 ಕುರಿಗಳು ಗುಂಡಿಯಲ್ಲಿ ಶೇಖರಣೆ ಆಗಿದ್ದ ನೀರನ್ನು ಕುಡಿದಿದ್ದು, ಈ ಪೈಕಿ ಹೊಟ್ಟೆೆ ಉಬ್ಬಸದಿಂದ ಏಕಾಏಕಿ 50ಕ್ಕೂ ಹೆಚ್ಚು ಕುರಿಗಳ ಸಾವು ಸಂಭವಿಸಿದೆ.
ಇದರಿಂದಾಗಿ ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟವಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡುವಂತೆ ಕುರಿಗಾಯಿ ಆಗ್ರಹಿಸಿದ್ದಾರೆ.
ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆೆ ಗಬ್ಬೂರು ಠಾಣೆ ಪೊಲೀಸರು, ಪಶು ವೈದ್ಯಾಾಧಿಕಾರಿಗಳು, ಗ್ರಾ.ಪಂ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.