ರಾಯಚೂರು: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಯಾಪಲದಿನ್ನಿ ಗ್ರಾಮದಲ್ಲಿ ‘ಪ್ರಜಾಸೇವಾ–ಸೇವೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ನೇರವಾಗಿ ಸಲ್ಲಿಸಿದರು. ಒಟ್ಟು 475 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 423 ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಿ ಪರಿಹಾರ ಒದಗಿಸಲಾಯಿತು. ಬಾಕಿ ಉಳಿದ 52 ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಶೀಲಿಸಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸ್ಥಳದಲ್ಲೇ ವಿಲೇವಾರಿಯಾದ ಅರ್ಜಿಗಳಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಸೌಲಭ್ಯ, ಕಾರ್ಮಿಕರ ಕಾರ್ಡ್, ವೃದ್ಧಾಪ್ಯ ಪಿಂಚಣಿ, ಆರೋಗ್ಯ ಕಾರ್ಡ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಆರ್‌ಡಬ್ಲ್ಯೂಎಸ್), ಜೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳು ಹಾಗೂ ಬೇಡಿಕೆಗಳು ಒಳಗೊಂಡಿದ್ದವು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮತ್ತು ಯಾವುದೇ ಅರ್ಜಿಗಳು ವಿಳಂಬವಾಗದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor